ಬೈಕಂಪಾಡಿ: ಟ್ಯಾಂಕರ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು
ಸುರತ್ಕಲ್, ಫೆ.24: ಆ್ಯಕ್ಟಿವಾ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಬೈಕಂಪಾಡಿಯ ಎಪಿಎಂಸಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಅಪರಾಹ್ನ ನಡೆದಿದೆ.
ಘಟನೆಯಲ್ಲಿ ಮೃತ ಪಟ್ಟ ಆಕ್ಟಿವಾ ಸವಾರರಗುರುತು ಇನ್ನೂ ಪತ್ತೆಯಾಗಿಲ್ಲ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಆ್ಯಕ್ಟಿವಾಗೆ ಹಿಂಬದಿಯಿಂದ ಟ್ಯಾಂಕರ್ ಢಿಕ್ಕಿಹೊಡೆಯಿತೆನ್ನಲಾಗಿದೆ. ಘಟನೆಯಲ್ಲಿ ರಸ್ತೆಗೆ ಎಸೆಯಲ್ಪಟ್ಟ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯೆ ಮೃತಪಟ್ಟರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ವಲಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಸೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story