ಎ.11: ಕೊಲ್ಲರಕೋಡಿಯಲ್ಲಿ ಮದ್ರಸ ಉದ್ಘಾಟನೆ
ನರಿಂಗಾನ, ಎ.9: ನೂರುಲ್ ಹುದಾ ಮಸ್ಜಿದ್ ತಖ್ವಾ, ಎಸ್ವೈಎಸ್, ಎಸ್ಸೆಸ್ಸೆಫ್ ಕೊಲ್ಲರಕೋಡಿ ಇದರ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಮದ್ರಸ ಕಟ್ಟಡ ಉದ್ಘಾಟನೆಯು ಎ.11ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ.
ಸೈಯದ್ ಫಝಲ್ ಕೋಯಮ್ಮ ತಂಙಳ್ ಮದ್ರಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ಬಾಸ್ ಉಸ್ತಾದ್ ವಹಿಸಲಿದ್ದಾರೆ. ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹೀಂ ಅಹ್ಸನಿ ಸ್ವಾಗತಿಸಲಿದ್ದಾರೆ. ಝಕರಿಯ್ಯ ಫೈಝಿ, ಪಿ.ಎ. ಅಹ್ಮದ್ ಬಾಖವಿ, ಕರೀಂ ಫೈಝಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story