ಕಡಬ: ಸಿಡಿಲು ಬಡಿದು ಬಾಲಕಿಗೆ ಗಾಯ
ಕಡಬ. ಎ.20: ಗುರುವಾರ ಸಂಜೆ ಸುರಿದ ಭಾರೀ ಗಾಳಿಮಳೆಯ ಸಂದರ್ಭ ಸಿಡಿಲು ಬಡಿದು ಬಾಲಕಿಯೋರ್ವಳು ಗಾಯಗೊಂಡ ಘಟನೆ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಕೇಶವ ಎಂಬವರ ಪುತ್ರಿ, ಆಲಂಕಾರು ಶ್ರೀ ಭಾರತಿ ವಿದ್ಯಾಕೇಂದ್ರದ 2ನೇ ತರಗತಿಯ ವಿದ್ಯಾರ್ಥಿನಿ ಭವ್ಯಾ(8) ಗಾಯಗೊಂಡ ಬಾಲಕಿ. ಈಕೆ ತನ್ನ ಹೆತ್ತವರೊಂದಿಗೆ ಮನೆಯಲ್ಲಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾಗಿದ್ದಾಳೆ. ತಕ್ಷಣವೇ ಭವ್ಯಾಳನ್ನು ಆಲಂಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಸಂಜೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ.
Next Story