ಕಡಬ: ಹೊಳೆಗೆ ಸ್ನಾನಕ್ಕಿಳಿದ ವ್ಯಕ್ತಿ ನೀರಲ್ಲಿ ಮುಳುಗಿ ಮೃತ್ಯು
ಕಡಬ, ಮೇ 8: ಸ್ನಾನಕ್ಕೆಂದು ಹೊಳೆ ನೀರಿಗಿಳಿದ ವ್ಯಕ್ತಿಯೋರ್ವರು ಮುಳುಗಿ ಮೃತಪಟ್ಟ ಘಟನೆ ಕುಮಾರಧಾರಾ ಹೊಳೆಯ ಪಟ್ನ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ದಿ. ಮೇದಪ್ಪ ಗೌಡ ಎಂಬವರ ಪುತ್ರ ಬಾಲಕೃಷ್ಣ ಗೌಡ (35) ಎಂದು ಗುರುತಿಸಲಾಗಿದೆ.
ಇವರು ತನ್ನ ಸ್ನೇಹಿತರೊಂದಿಗೆ ಸೋಮವಾರ ರಾತ್ರಿ ಕುಮಾರಧಾರಾ ಹೊಳೆಯ ಪಟ್ನ ಎಂಬಲ್ಲಿ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ನೀರುಪಾಲಾಗಿದ್ದರೆನ್ನಲಾಗಿದೆ. ವಿಷಯ ತಿಳಿದು ಮಂಗಳವಾರ ಬೆಳಗ್ಗೆ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story