ಜನಾದೇಶಕ್ಕನುಗುಣವಾಗಿ ನಮ್ಮದೇ ಸರಕಾರ: ಕೋಟ
ಉಡುಪಿ, ಮೇ 16: ಸರಳ ಬಹುಮತದ ಕೊರತೆಯ ನಡುವೆಯೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ರಾಜಕೀಯ ಪಕ್ಷವಾಗಿ ಮೂಡಿ ಬಂದ ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡಬೇಕಾದ ಅನಿವಾರ್ಯತೆ ಇದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ.
ರಾಷ್ಟ್ರ ರಾಜಕಾರಣದ ಇತಿಹಾಸದಲ್ಲಿ ಬಹು ದೊಡ್ಡ ರಾಜಕೀಯ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ಪ್ರಮಾಣ ವಚನ ನೀಡಿ ಒಂದು ವಾರದಲ್ಲಿ ಬಹುಮತ ಸಾಬೀತು ಪಡಿಸಲು ಸೂಚಿಸಿದ ಉದಾಹರಣೆಗಳಿವೆ. ಅದರಂತೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಕರೆಯಲಿದ್ದಾರೆ ಎಂಬ ವಿಶ್ವಾಸವನ್ನು ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ.
Next Story