ದ.ಕ. ಜಿಲ್ಲೆಯಲ್ಲಿ ನಿಷೇದಾಜ್ಞೆ ಮುಂದುವರಿಕೆ: ಜಿಲ್ಲಾಧಿಕಾರಿ
ಮಂಗಳೂರು, ಮೇ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 22ರ ಬೆಳಗ್ಗೆ 10 ಗಂಟೆಯವರೆಗೆ 144 ಸೆಕ್ಷನ್ ನಿಷೇದಾಜ್ಞೆ ಮುಂದುವರಿಕೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ವಿಶ್ವಾಸಮತ ಯಾಚನೆ ಹಿನ್ನೆಲೆ ಶನಿವಾರದಿಂದ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ನಿಷೇದಾಜ್ಞೆಯ ನಡುವೆಯೂ ಘರ್ಷನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಮೇ 22 ರವರೆಗೆ ಮುಂದುವರಿಕೆಯಾಗಿದೆ ಮತ್ತು ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
Next Story