ಕೋಟ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಕೋಟ, ಮೇ 20: ತೆಕ್ಕಟ್ಟೆ ಜಂಕ್ಷನ್ ಬಳಿ ಮೇ 19ರಂದು ರಾತ್ರಿ 8ಗಂಟೆ ಸುಮಾರಿಗೆ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರಾದ ಅವಿನಾಶ್ ಉಳ್ತೂರು, ಸಂತೋಷ ಕೋಡಿ ಕನ್ಯಾನ ಮತ್ತು ಇತರ ನಾಲ್ಕೈದು ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗುತ್ತ ಪ್ರತಿಭಟನೆ ಮಾಡಿ ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಅಲ್ಲದೇ ಸಾಸ್ತಾನದಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿರುವುದಾಗಿ ಚುನಾವಣಾ ಪ್ಲೈಯಿಂಗ್ ಸ್ಕ್ಯಾಡ್ ಉಮೇಶ್ ಎಚ್. ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Next Story