ನಾಳೆ ಧರ್ಮಸ್ಥಳಕ್ಕೆ ನಿಯೋಜಿತ ಸಿಎಂ ಕುಮಾರಸ್ವಾಮಿ ಭೇಟಿ
ಮಂಗಳೂರು, ಮೇ 21: ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇ 22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 7 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಕುಮಾರಸ್ವಾಮಿ 8:30ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ ಬಂದಿಳಿಯುವರು. ಇಲ್ಲಿಂದ ಶ್ರೀ ಮಂಜುನಾಥ ಸ್ವಾಮಿ ದೇವಳಕ್ಕೆ ಭೇಟಿ ನೀಡುವ ಅವರು 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story