Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಹಿರಿಯ ಸಾಹಿತಿ ಬಿ.ಎಂ.ರೋಹಿಣಿಗೆ...

​ಹಿರಿಯ ಸಾಹಿತಿ ಬಿ.ಎಂ.ರೋಹಿಣಿಗೆ ವಿಶುಕುಮಾರ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ3 Jun 2018 10:58 PM IST
share
​ಹಿರಿಯ ಸಾಹಿತಿ ಬಿ.ಎಂ.ರೋಹಿಣಿಗೆ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಮಂಗಳೂರು, ಜೂ. 2: ಯುವ ವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ಮಹಿಳಾ ಘಟಕ ಜಂಟಿ ಆಶ್ರಯದಲ್ಲಿ ನಗರ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ರವಿವಾರ ನಡೆದ ‘ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಹಿರಿಯ ಸಾಹಿತಿ, ವಿಮರ್ಶಕಿ ಬಿ.ಎಂ.ರೋಹಿಣಿ ಅವರಿಗೆ ‘ವಿಶುಕುಮಾರ್ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.

ಹಿರಿಯ ಕಾದಂಬರಿಕಾರ ವಿಶುಕುಮಾರ್ ಸಾಹಿತ್ಯಿಕವಾಗಿ ಶ್ರೀಮಂತರು. ನಾನು ಕೇವಲ ನಾಲ್ಕು- ಐದು ಸೆಂಟ್ಸ್ ಜಮೀನಿನಲ್ಲಿ ಸಣ್ಣ ಮಟ್ಟದ ಸಾಹಿತ್ಯಿಕ ಬೇಸಾಯ ಮಾಡುವವಳು ಎಂದು ಹಿರಿಯ ಸಾಹಿತಿ, ವಿಮರ್ಶಕಿ ಬಿ.ಎಂ.ರೋಹಿಣಿ ವಿಶ್ಲೇಷಿಸಿದರು. ಪ್ರಸ್ತುತ ವಿಶುಕುಮಾರ್ ಕತೆಗಾರ, ಕಾದಂಬರಿಗಾರ, ನಟ- ನಿರ್ದೇಶಕ, ಪತ್ರಕರ್ತರಾಗಿ ವಿವಿಧ ವಿಭಾಗಗಳಲ್ಲಿ ಹೆಸರು ಮಾಡಿದವರು. ಅವರ ಹಲವು ಕಾದಂಬರಿ ಹಾಗೂ ಇತರ ಕೃತಿಗಳು ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಅವುಗಳನ್ನು ಮರು ಮುದ್ರಿಸುವ ಕಾಲ ಬರಲಿ. ಯುವ ವಾಹಿನಿ ಈ ನಿಟ್ಟಿನಲ್ಲಿ ಆಸಕ್ತಿ ಹೆಚ್ಚಿನ ಆಸಕ್ತಿ ವಹಿಸುವ ಭರವಸೆ ಇರುವುದಾಗಿ ಅವರು ಆಶಿಸಿದರು.

ನಾನು ಬೆಳೆಯಲು ಬೀಡಿ ಕಂಪನಿಗಳು, ಗೇರು ಬೀಜ ಕಂಪೆನಿಗಳು, ಆಕಾಶವಾಣಿ, ಮಾಧ್ಯಮಗಳು ಹೆಚ್ಚಿನ ಸಹಕಾರ ನೀಡಿವೆ. ಇದರಿಂದಾಗಿ ನಾನು ಲೇಖಕಿಯಾಗಿ ಗುರುತಿಸಿಕೊಳ್ಳಲು ಮತ್ತು ವೇದಿಕೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗಿದೆ ಎಂದರು. ನನಗೆ ವಯಸ್ಸು 74 ರ ಆಗಿದ್ದರೂ 24 ರ ಮನಸ್ಸು ನನ್ನದು. ಸಾಧನೆ ಮಾಡಬೇಕೆಂಬ ಹುರುಪು ಇಂದಿಗೂ ಇದೆ. ಮಾಡಬೇಕಾದ ಕೆಲಸಗಳು ಹಲವು ಇವೆ ಎಂದವರು ಹೇಳಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿ ಮಾತನಾಡಿ, ಬಿ.ಎಂ. ರೋಹಿಣಿ ಅವರು ಛಲವಾದಿ. ನಿಜವಾಗಿಯೂ ಪ್ರಶಸ್ತಿ ಅವರ ಸಾಧನೆಗೆ ಸಂದ ಗೌರವ ಎಂದರು. 74 ರ ಈ ವಯಸ್ಸಿನಲ್ಲಿಯೂ ಬಿಲ್ಲವರ ಗುತ್ತಿನ ಮನೆಗಳ ಬಗ್ಗೆ ಕ್ಷೇತ್ರ ಕಾರ್ಯ ನಡೆಸಿ ಸಂಶೋಧನೆ ನಡೆಸುತ್ತಿರುವುದು ಸಾಹಿತ್ಯಿಕ ಕೆಲಸಗಳ ಬಗ್ಗೆ ಅವರಲ್ಲಿರುವ ತುಡಿತವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ರಂಗಕರ್ಮಿ ವಿ.ಜಿ.ಪಾಲ್, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.ಯುವ ಸಾಹಿತಿ, ನಿರ್ದೇಶಕ ಸ್ಮಿತೇಶ್ ಎಸ್.ಬಾರ್ಯ ಅವರಿಗೆ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯುವ ವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಾಧು ಪೂಜಾರಿ ಪ್ರಸ್ತಾವನೆಗೈದರು. ಆಯ್ಕೆ ಸಮಿತಿ ಸದಸ್ಯರ ಪರವಾಗಿ ಪ್ರಭಾಕರ ನೀರುಮಾರ್ಗ ಮಾತನಾಡಿದರು. ರಾಜೇಶ್ ಸುವರ್ಣ ಮತ್ತು ಶುಭಾ ರಾಜೇಂದ್ರ ಪ್ರಶಸ್ತಿ ವಿಜೇತರ ಪರಿಚಯಿಸಿದರು. ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X