ಅಪರಿಚಿತ ವಾಹನ ಢಿಕ್ಕಿ: ಭಿಕ್ಷುಕ ಮೃತ್ಯು
ಉಡುಪಿ, ಜೂ.24: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ 35 ವರ್ಷ ಪ್ರಾಯದ ಅಪರಿಚಿತ ಭಿಕ್ಷುಕರೊಬ್ಬರು ಮೃತಪಟ್ಟ ಘಟನೆ ಪುತ್ತೂರು ಗ್ರಾಮದ ಅಂಬಾಗಿಲು ಬಳಿಯ ಎಲ್ವಿಟಿ ದೇವಸ್ಥಾನದ ಎದುರು ಜೂ. 23ರಂದು ರಾತ್ರಿ ವೇಳೆ ನಡೆದಿದೆ.
ಉಡುಪಿಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಅರ್ಧ ತೋಳಿನ ಕಪ್ಪು ಬಣ್ಣದ ಶರ್ಟ್, ನೀಲಿ ಬಣ್ಣದ ಜೀನ್ಸ್ ಧರಿಸಿದ್ದರು. ಕಳೆದ ಒಂದು ವರ್ಷದಿಂದ ಕಲ್ಯಾಣಪುರ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಮೃತ ವ್ಯಕ್ತಿ ಹಿಂದಿ ಭಾಷೆ ಮಾತನಾಡುತಿದ್ದರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story