ವರ್ಕಾಡಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೊಳಗಾಗಿ ಕೃಷಿಕ ಮೃತ್ಯು
ಮಂಜೇಶ್ವರ, ಜು.9: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಕೃಷಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರ್ಕಾಡಿಯಲ್ಲಿ ನಡೆದಿದೆ.
ಮೃತರನ್ನು ವರ್ಕಾಡಿ ನಿವಾಸಿ ಗಣಪತಿ ಭಟ್(78) ಎಂದು ಗುರುತಿಸಲಾಗಿದೆ. ಇವರು ರವಿವಾರ ಸಂಜೆ ಹೂವು ಕೀಳಲೆಂದು ಮನೆ ಸಮೀಪದ ತೋಟಕ್ಕೆ ಹೋದ ವೇಳೆ ಈ ಅವಘಡ ಸಂಭವಿಸಿದೆ.
ಬಹಳ ಸಮಯ ಕಳೆದರೂ ತೋಟಕ್ಕೆ ಹೋದ ಗಣಪತಿ ಭಟ್ ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಹುಡುಕಾಟ ನಡೆಸಿದಾಗ ವಿದ್ಯುತ್ ಆಘಾತಕ್ಕೊಳಗಾದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದರು. ಕೂಡಲೇ ವಿದ್ಯುತ್ ಕಚೇರಿಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಳಿಕ ಗಣಪತಿ ಭಟ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
Next Story