ಭಾರೀ ಮಳೆ: ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಚಿಕ್ಕಮಗಳೂರು, ಜು.12: ಕಳೆದ ರಾತ್ರಿಯಿಂದ ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಿಸಲಾಗಿದೆ.
ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಹಾಗೂ ಕೊಪ್ಪತಾಲೂಕಿನ ಶಾಲಾಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀ ರಂಗಯ್ಯ ಆದೇಶಿಸಿದ್ದಾರೆ.
ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ರಾತ್ರಿಯಿಂದ ಕಳಸ, ಶೃಂಗೇರಿ, ಕುದುರೆಮುಖ, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯಲ್ಲಿ ಅಬ್ಬರದ ಮಳೆಯಾಗುತ್ತಿದೆ.
ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದರೆ, ತುಂಗಾ ನದಿ ಪ್ರವಾಹದ ರೀತಿಯಲ್ಲಿ ಹರಿಯುತ್ತಿದೆ. ಹೇಮಾವತಿ ನದಿಯೂ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಸಾರಲಾಗಿದೆ.
Next Story