ತೊಟ್ಟಿಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕ ಮೃತ್ಯು
ಚಿಕ್ಕಮಗಳೂರು, ಜು.12: ಮಗವನ್ನು ತೂಗುವ ತೊಟ್ಟಿಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಇಲ್ಲಿನ ಆದಿಶಕ್ತಿ ನಗರದಲ್ಲಿ ನಡೆದಿರುವುದು ವರದಿಯಾಗಿದೆ.
ಮೂಲತಃ ಚಿತ್ರದುರ್ಗದ ತೇಜಸ್(10) ಮೃತಪಟ್ಟ ಬಾಲಕ. ಈತ ಆದಿಶಕ್ತಿ ನಗರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದ ವೇಳೆ ಈ ಅವಘಡ ಸಂಭವಿಸಿದೆ.
ಮನೆಯಲ್ಲಿ ಸಣ್ಣ ಮಗುವನ್ನು ತೊಟ್ಟಿಲಲ್ಲಿ ತೂಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ತೊಟ್ಟಿಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ತೇಜಸ್ ಮೃತದೇಹ ಪತ್ತೆಯಾಗಿತ್ತೆನ್ನಲಾಗಿದೆ. ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಸಿಲುಕಿರಬಹುದೆಂದು ಶಂಕಿಸಲಾಗಿದೆ.
ಘಟನೆಯ ಬಗ್ಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story