ಬಿ.ಎ.ಮೊಹಿದೀನ್ ರ ಆತ್ಮಕಥನ ‘ನನ್ನೊಳಗಿನ ನಾನು’ ಬಿಡುಗಡೆ
ನುಡಿನಮನ ಕಾರ್ಯಕ್ರಮ
ಮಂಗಳೂರು, ಜು.20: ಮಾಜಿ ಸಚಿವ, ಹಿರಿಯ ಚೇತನ ಬಿ.ಎ.ಮೊಹಿದೀನ್ ಅವರ ಆತ್ಮಕಥನ ‘ನನ್ನೊಳಗಿನ ನಾನು’ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ಸಂಜೆ ನಗರದ ಪುರಭವನದಲ್ಲಿ ಜರುಗಿತು.
ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಆತ್ಮಕಥನ ಬಿಡುಗಡೆಗೊಳಿಸಿದರು. ಇದೇ ಸಂದರ್ಭ ಬಿ.ಎ.ಮೊಹಿದೀನ್ ಅವರಿಗೆ ‘ನುಡಿನಮನ’ವೂ ನಡೆಯಿತು.
ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಮಾಜಿ ಸಚಿವ ಎಂ.ಸಿ.ನಾಣಯ್ಯ, ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ.ಫಾರೂಕ್, ಮಾಜಿ ಸಚಿವರಾದ ಬಿ.ರಮಾನಾಥ ರೈ,ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕರಾದ ವಸಂತ ಬಂಗೇರ, ಜೆ.ಆರ್.ಲೋಬೊ, ಯೋಗೀಶ್ ಭಟ್, ಮೇಯರ್ ಭಾಸ್ಕರ ಮೊಯ್ಲಿ, ಯೆನೆಪೊಯ ಸಂಸ್ಥೆಯ ಮುಖ್ಯಸ್ಥ ಯೆನೆಪೊಯ ಅಬ್ದುಲ್ಲ ಕುಂಞಿ,ವಾರ್ತಾಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಬ್ಯಾರೀಸ್ ಸಂಸ್ಥೆಯ ಮುಖ್ಯಸ್ಥ ಸೈಯದ್ ಮುಹಮ್ಮದ್ ಬ್ಯಾರಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ವಸಂತ ಆಚಾರಿ, ಎಸ್.ಡಿಪಿ.ಐ. ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಆತ್ಮಕಥನದ ನಿರೂಪಕ ಮುಹಮ್ಮದ್ ಕುಳಾಯಿ, ಬಿ.ಎ.ಮೊಹಿದೀನ್ ಅವರ ಪುತ್ರ ಆಸಿಫ್ ಮಸೂದ್, ಅಳಿಯ ಅಹ್ಮದ್ ಶರೀಫ್ ಉಪಸ್ಥಿತರಿದ್ದರು.
ಬಿ.ಎ. ಮುಹಮ್ಮದ್ ಅಲಿ ಸ್ವಾಗತಿಸಿದರು. ಟೀಕೇಸ್ ಗ್ರೂಪ್ ನ ಉಮರ್ ಟೀಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.