ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಲು ಆಗ್ರಹ : ಎಸ್ಎಫ್ಐನಿಂದ ಕೆಎಸ್ಸಾರ್ಟಿಸಿ ಅಧಿಕಾರಿಗೆ ಮನವಿ
ಮಂಗಳೂರು, ಜು.20: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ದ.ಕ. ಜಿಲ್ಲಾ ಸಮಿತಿಯು ವಿಭಾಗೀಯ ನಿಯಂತ್ರಣ ಅಧಿಕಾರಿ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಕ್ಕೆ ಮನವಿ ಸಲ್ಲಿಸಿತು.
ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ಗಳ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ ಎಷ್ಟೊ ಪ್ರದೇಶಗಳಲ್ಲಿ ಸರಕಾರಿ ಬಸ್ನ ಸೌಲಭ್ಯವಿಲ್ಲ. ಬಹುತೇಕ ವಿದ್ಯಾರ್ಥಿಗಳು ಖಾಸಗಿ ಬಸ್ಗಳಲ್ಲಿ ಪ್ರಯಾಣ ಮಾಡುತ್ತಾರೆ. ಉಚಿತ ಬಸ್ಪಾಸ್ ಕೇವಲ ಸರಕಾರಿ ಬಸ್ಗಳಿಗೆ ಅನ್ವಯ ಮಾಡದೆ ಖಾಸಗಿ ಬಸ್ಗಳಿಗೂ ಅನ್ವಯ ಮಾಡಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಎಫ್ಐನ ಜಿಲ್ಲಾ ಅಧ್ಯಕ್ಷ ಚರಣ್ ಶೆಟ್ಟಿ ಪಂಜಿಮೊಗರು, ಜಿಲ್ಲಾ ಕಾರ್ಯದರ್ಶಿ ಮಾಧುರಿ ಬೋಳಾರ್, ಮಂಗಳೂರು ನಗರ ಕಾರ್ಯದರ್ಶಿ ಮಯೂರಿ ಬೋಳಾರ್, ಸುಹಾಸ್ ಬೆಳ್ತಂಗಡಿ, ಗಣೇಶ್ ಬೋಳಾರ್, ಕೌಶಿಕ್, ಶರಣಪ್ಪ ಉಪಸ್ಥಿತರಿದ್ದರು.
Next Story