ಅವಿಭಜಿತ ದ.ಕ. ಜಿಲ್ಲೆಯ ಶೈಕ್ಷಣಿಕ ಕಾಳಜಿ ಶ್ಲಾಘನೀಯ: ಝಮೀರ್ ಅಹ್ಮದ್
ಫರಂಗಿಪೇಟೆಯಲ್ಲಿ ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಶಾಲೆ ಉದ್ಘಾಟನೆ
ಬಂಟ್ವಾಳ, ಜು.21: ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಹಜ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ. ಫರಂಗಿಪೇಟೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಸ್ಥಾಪಿಸಿರುವ ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಶಾಲೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬ್ರಿಟಿಷರ ಕಾಲದ ಈ ಶಾಲೆಯನ್ನು ಮುಚ್ಚುವ ಹಂತದಲ್ಲಿರುವ ಸಂದರ್ಭದಲ್ಲಿ ಇಲ್ಲಿನ ಟುಡೇ ಫೌಂಡೇಶನ್ ಮುಖ್ಯಸ್ಥ ಉಮರ್ ಫಾರೂಕ್ ಹಾಗೂ ಇನ್ನಿತರ ಕಾರ್ಯಕರ್ತರು ಶ್ರಮಿಸಿದ ಫಲವಾಗಿ ಇದೀಗ ಮತ್ತೆ ಮಕ್ಕಳಿಗೆ ಶಿಕ್ಷಣ ಸರಕಾರಿ ಶಾಲೆಗಳ ಉಳಿವಿಗಾಗಿ ಪಣ ತೊಟ್ಟಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಮಾತನಾಡಿ ಶುಭ ಹಾರೈಸಿದರು.
ಇದೇ ವೇಳೆ ಸಚಿವರಾದ ಝಮೀರ್ ಅಹ್ಮದ್ ಹಾಗೂ ಯು.ಟಿ.ಖಾದರ್ ಅವರನ್ನು ಸನ್ಮಾನಿಸಲಾಯಿತು.
ಅದೇ ರೀತಿ ಟುಡೇ ಫೌಂಡೇಶನ ಅಧ್ಯಕ್ಷ ಉಮರ್ ಫಾರೂಕ್ ಹಾಗೂ ಇನ್ನಿತರ ಸದಸ್ಯರನ್ನು ಸಚಿವದ್ವಯರು ಅಭಿನಂದಿಸಿದರು.
ವೇದಿಕೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸದಸ್ಯ ಶಾಹುಲ್ ಹಮೀದ್, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷ ಲಿಡಿಯಾ ಪಿಂಟೋ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಫರಂಗಿಪೇಟೆ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ, ಕಾರ್ಯದರ್ಶಿ ಯೂಸುಫ್ ಅಲಂಕಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್.ಕರೀಂ, ಹಿರಿಯಾರಾದ ಎಫ್.ಎ.ಖಾದರ್, ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಗೋಳ್ತಮಜಲ್, ಶಾಲಾ ಮುಖ್ಯೋಪಾಧ್ಯಾಯಿನಿ ಶಕುಂತಳಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಸಿರ್, ಇಸ್ಮಾಯೀಲ್ ಕೆ.ಇ.ಎಲ್., ಸೇವಾಂಜಲಿ ಮುಖ್ಯಸ್ಥ ಕೃಷ್ಣಕುಮಾರ್ ಪೂಂಜಾ, ಪ್ರಕಾಶ್ ಶೆಟ್ಟಿ, ಗ್ರಾಪಂ ಸದಸ್ಯರಾದ ಹಾಶಿರ್ ಪೇರಿಮಾರ್, ಮುಹಮ್ಮದ್ ಮೋನು, ಇಕ್ಬಾಲ್ ಸುಜೀರ್, ರಿಯಾಝ್ ಕುಂಪನಮಜಲ್, ಸಂತೋಷ್, ನೆತ್ತರೆಕೆರೆ, ಝೀನತ್ ಕುಂಜತ್ಕಳ, ಭಾಸ್ಕರ್ ರೈ ಕುಂಜತ್ಕಳ, ರಝಿಯಾ ಫರಂಗಿಪೇಟೆ, ಹುಸೈನ್ ಎಂ., ನಝೀರ್ ಹತ್ತನೇ ಮೈಲ್ಕಲ್ಲು, ಮುಮ್ತಾಝ್ ಸುಜೀರ್, ರಶೀದಾ ಬಾನು, ಸುಜಾತಾ ಮಾರಿಪ್ಪಳ್ಳ, ರೆಹನಾ ಮಾರಿಪ್ಪಳ್ಳ, ಲವೀನಾ ಡಿಸೋಜ ಕುಂಪನಮಜಲ್, ಜಯಂತಿ ಕುಂಡೆಲ್, ಸಂತೋಷ್ ನೆತ್ರೆಕೆರೆ, ಮನೋಜ್ ಆಚಾರ್ಯ, ಹೇಮಲತಾ, ಮಾಜಿ ತಾಪಂ ಸದಸ್ಯ ಇಕ್ಬಾಲ್ ದರ್ಬಾರ್, ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ, ಝಾಹಿರ್ ಅಬ್ಬಾಸ್ ಉಪಸ್ಥಿತರಿದ್ದರು.
ಮಾಜಿ ಜಿಪಂ ಸದಸ್ಯ ಉಮರ್ ಫಾರೂಕ್ ಸ್ವಾಗತಿಸಿ, ಶಾಲೆಯ ಹಾಗೂ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಸ್ತಾವಿಸಿದರು. ಅಬ್ದುಲ್ ಹನೀಫ್ ನಿರೂಪಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ಉಚಿತ ಬಾಗ್ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.