ಪದೋನ್ನತಿಗೊಂಡ ಕಾಪು ಮೆಸ್ಕಾಂ ಅಧಿಕಾರಿಗೆ ಬೀಳ್ಕೊಡುಗೆ
ಕಾಪು, ಜು.21: ವಿದ್ಯುತ್ ಗುತ್ತಿಗೆದಾರರ ಸಂಘ ಕಾಪು ಉಪ ಸಮಿತಿ ವತಿಯಿಂದ ಕಾಪು ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ಇದೀಗ ಕಾರ್ಯನಿರ್ವಾಹಕ ಇಂಜಿನಿ ಯರ್ ಆಗಿ ಪದೋನ್ನತಿಗೊಂಡು ವರ್ಗಾವಣೆಗೊಂಡಿರುವ ನರಸಿಂಹ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಕಾಪು ಹೊಟೇಲ್ ಮಯೂರದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಉಪ ಸಮಿತಿ ಅಧ್ಯಕ್ಷ ಅನ್ವರ್ ಅಲಿ ಕಾಪು ವಹಿಸಿದ್ದರು. ಇದೇ ಸಂದರ್ಭದಲ್ಲಿ ಮೆಸ್ಕಾಂ ಕಾಪು ಉಪವಿಭಾಗಕ್ಕೆ ಸಹಾಯಕ ಕಾರ್ಯನಿರ್ವ ಹಕರಾಗಿ ವರ್ಗಾವಣೆಗೊಂಡು ಆಗಮಿಸಿರುವ ಜೆ.ಪಿ.ರಾಮ ಅವರನ್ನು ಬರ ಮಾಡಿಕೊಳ್ಳಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಕೆ.ಆಳ್ವ, ಹಿರಿಯ ಗುತ್ತಿಗೆದಾರ ಮುಷ್ತಾಕ್ ಇಬ್ರಾಹಿಂ, ಸಹಾಯಕ ತಾಂತ್ರಿಕ ಅಧಿಕಾರಿ ಜಯ ಸ್ಮಿತಾ ಮಾತನಾಡಿದರು. ಜತೆ ಕಾರ್ಯದರ್ಶಿ ರವೀಂದ್ರ ಪೂಜಾರಿ, ಕೋಶಾಧಿಕಾರಿ ಶ್ರೀಧರ ಪೂಜಾರಿ ಉಪಸ್ಥಿತರಿದ್ದರು.
ಉಪಸಮಿತಿ ಕಾರ್ಯದರ್ಶಿ ದೇವರಾಜ ಕೋಟ್ಯಾನ್ ಸ್ವಾಗತಿಸಿದರು. ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ್ ಎಂ. ಪ್ರಾಸ್ತಾವಿಕ ವಾಗಿ ಮಾತನಾಡಿದರು. ಉಪಾಧ್ಯಕ್ಷ ದಿನೇಶ್ ಆರ್.ಕೋಟ್ಯಾನ್ ವಂದಿಸಿ ದರು. ಲಕ್ಷ್ಮೀಕಾಂತ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕೋನ ಸ್ವಿಚ್ಛಸ್ ಕಂಪೆನಿಯವರಿಂದ ಪ್ರಾತ್ಯಕ್ಷಿಕೆ ಜರಗಿತು.