ಬಂಟ್ವಾಳ: ನೆರೆ ಬಾಧಿತ ಪ್ರದೇಶಗಳಿಗೆ ಸಚಿವ ಯು.ಟಿ.ಖಾದರ್ ಭೇಟಿ
ಬಂಟ್ವಾಳ, ಆ.17: ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಶುಕ್ರವಾರ ಬೆಳಗ್ಗೆ ಬೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಮಾತನಾಡಿದ ಸಚಿವರು, ಈಗಾಗಲೇ ಜಿಲ್ಲಾಡಳಿತ ನೆರೆ ಪೀಡಿತ ಪ್ರದೇಶಗಳ ಜನರಿಗೆ ತಾತ್ಕಾಲಿಕ ಬದಲಿ ವ್ಯವಸ್ಥೆ ಕಲ್ಲಿಸಿದ್ದಾರೆ. ಇಲ್ಲಿನ ಜನರಿಗೆ ಯಾವುದೇ ತೊಂದರಯಾಗದಂತೆ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ. ಮಳೆ ಕ್ಷೀಣಿಸಿದ ನಂತರವೇ ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಬಿ.ಎಚ್.ಖಾದರ್, ಮುಖ್ಯಾಧಿಕಾರಿ ರೇಖಾ ಶೆಟ್ಟಿ, ವಾರ್ತಾಧಿಕಾರಿ ಖಾದರ್ ಶಾ, ಸಿದ್ದೀಕ್ ಬೋಗೋಡಿ, ರಫೀಕ್ ಮತ್ತಿತರರು ಜೊತೆಗಿದ್ದರು.
Next Story