ಸೌದಿಯಿಂದ ಮರಳಿ ಬರುವವರ ನೋಂದಣಿಗೆ ಡಿಸಿ ಕಚೇರಿಯಲ್ಲಿ ನೋಂದಣಿ ಕೇಂದ್ರ: ಸಚಿವ ಖಾದರ್
ಮಂಗಳೂರು, ಸೆ.3: ಸೌದಿಕರಣದ ಹಿನ್ನೆಲೆಯಲ್ಲಿ ತವರಿಗೆ ಮರಳುತ್ತಿರುವವರ ನೋಂದಣಿಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಕೇಂದ್ರ ತೆರೆಯಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌದಿ ಅರೇಬಿಯಾದಿಂದ ಮರಳಿ ಬರುತ್ತಿರುವವರು ಹೆಸರು ನೋಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಲಾಗುವುದು. ಇದರಿಂದ ಸೌದಿಯಿಂದ ಹಿಂದಿರುಗಿದವರ ಸಮಗ್ರ ಮಾಹಿತಿ ಕಲೆ ಹಾಕಲು ಸಾಧ್ಯವಾಗಲಿದೆ. ಇವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
Next Story