ವಿಶ್ವ ಬಂಟರ ಸಮ್ಮಿಲನದ ಸಮಾರೋಪ
ಉಡುಪಿ, ಸೆ.9: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲ್ನ ಆವರಣದಲ್ಲಿ ರವಿವಾರ ಹಮ್ಮಿ ಕೊಳ್ಳಲಾದ ವಿಶ್ವ ಬಂಟರ ಸಮ್ಮಿಲನದ ಸಮಾರೋಪ ಸಮಾರಂಭವು ಸಂಜೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ, ಬೆಂಗಳೂರು ಎಂಆರ್ಜಿ ಗ್ರೂಪ್ನ ಪ್ರಕಾಶ್ ಶೆಟ್ಟಿ ಬಂಜಾರ, ವಿ.ಕೆ.ಗ್ರೂಪ್ನ ಕೆ.ಎಂ.ಶೆಟ್ಟಿ, ಭವಾನಿ ಶಿಪ್ಪಿಂಗ್ನ ಕೆ.ಡಿ.ಶೆಟ್ಟಿ, ಸ್ಕಾನ್ರೇ ಟೆಕ್ನಾ ಲಜೀಸ್ನ ಆಡಳಿತ ನಿರ್ದೇಶಕ ವಿಶ್ವ ಪ್ರಸಾದ್ ಆಳ್ವ ಮಾತನಾಡಿದರು.
ಈ ಸಂದರ್ಭದಲ್ಲಿ ಬಂಟ ಸಮುದಾಯದ ಹಿರಿಯ ಸಾಧಕರನ್ನು ಸನ್ಮಾನಿಸಲಾಯಿತು. ಉದ್ಯಮಿಗಳಾದ ತೋನ್ಸೆ ಆನಂದ ಶೆಟ್ಟಿ, ಶಶಿಕಿರಣ್ ಶೆಟ್ಟಿ, ಡಾ.ಪಿ.ವಿ.ಶೆಟ್ಟಿ, ಮಾಜಿ ಸಚಿವರಾದ ರಮಾನಾಥ್ ಶೆಟ್ಟಿ, ನಾಗರಾಜ್ ಶೆಟ್ಟಿ, ಅಮರನಾಥ್ ಶೆಟ್ಟಿ, ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಡಾ. ಮೋಹನ್ ಆಳ್ವ, ಬಿ.ಸಚ್ಚಿದಾನಂದ ಶೆಟ್ಟಿ, ಸುಧಾಕರ್ ಹೆಗ್ಡೆ, ಪ್ರಭಾಕರ ಜೆ. ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಡಾ.ಎಸ್.ಎಸ್.ಬಲ್ಲಾಳ್, ರವೀಂದ್ರ ಅರಸ, ಬಿ.ವಿವೇಕ್ ಶೆಟ್ಟಿ, ರಘುರಾಮ್ ಶೆಟ್ಟಿ, ಡಾ.ಎಂ.ಶಾಂತರಾಮ್ ಶೆಟ್ಟಿ, ಎಚ್. ಸುಧಾಕರ್ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಮನೋಹರ್ ಶೆಟ್ಟಿ ವೇದಿಕೆ ಯಲ್ಲಿದ್ದರು.
ವಿಜಯ ಪ್ರಸಾದ್ ಆಳ್ವ, ಕೊಲ್ಲಾಡಿ ಬಾಲಕೃಷ್ಣ ರೈ, ಜಯಕರ ಶೆಟ್ಟಿ ಇಂದ್ರಾಳಿ, ಸಿಎ ದಯಾಶರಣ್ ಶೆಟ್ಟಿ, ಕೆ.ಪೃಥ್ವಿರಾಜ್ ರೈ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸ್ವಾಗತಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.