ಸೆ.15: ಎಸ್ಡಿಪಿಐ ರ್ಯಾಲಿ
ಮಂಗಳೂರು, ಸೆ.14: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರ ಅಧಿಕಾರಕ್ಕೇರಿದ ನಂತರ ತೈಲ ಸಹಿತ ಅಗತ್ಯ ವಸ್ತುಗಳ ಬೆಲೆಯು ದಿನನಿತ್ಯ ಏರಿಕೆಯಾಗುತ್ತಿದೆ. ನೋಟು ಅನಣ್ಯೀಕರಣ ಮತ್ತು ಜಿಎಸ್ಟಿಯಂತಹ ನಿರ್ಧಾರದಿಂದ ತತ್ತರಿಸಿರುವ ದೇಶದ ಜನತೆಗೆ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯು ಹೊರೆಯಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಸೆ.15ರಂದು ಅಪರಾಹ್ನ 3ಗಂಟೆಗೆ ನಗರದ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿಯ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story