ರೈಲು ಢಿಕ್ಕಿ ಹೊಡೆದು ಮೃತ್ಯು
ಕುಂದಾಪುರ, ಸೆ.14: ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಕಬೈಲ್ ಎಂಬಲ್ಲಿ ಸೆ.14ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ವಂಡ್ಸೆಯ ಶೇಖರ ನಾಯ್ಕ(53) ಎಂದು ಗುರುತಿಸಲಾಗಿದೆ.
ಇವರು ತನ್ನ ಹೆಂಡತಿ ಮನೆಯಾದ ಕಂದಾವರ ಗ್ರಾಮದ ಹೇರಿಕೆರೆ ಎಂಬಲ್ಲಿ ವಾಸವಾಗಿದ್ದು, ಗುಲ್ವಾಡಿಯ ಪ್ರಭಾಕಿರಣ ಟೈಲ್ಸ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಲು ರೈಲ್ವೆ ಹಳಿ ದಾಟುತ್ತಿರುವಾಗ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದು ಮೃತಪಟ್ಟಿ ದ್ದಾರೆನ್ನಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story