ವ್ಯಾನ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಕೊಲ್ಲೂರು, ಸೆ.25: ಜೀತೋ ವ್ಯಾನ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಡೂರು ಗ್ರಾಮದ ರಾಜ್ಯ ಹೆದ್ದಾರಿಯ ತಿರುವು ರಸ್ತೆ ಗೇರು ಹಾಡಿ ಎಂಬಲ್ಲಿ ಸೆ.24ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಸತೀಶ ಎಂದು ಗುರುತಿಸಲಾಗಿದೆ. ಸಹ ಸವಾರ ಪ್ರಕಾಶ್ ಹಾಗೂ ಜೀತೋ ವ್ಯಾನ್ ಚಾಲಕ ರೋಹಿತ್ ಮತ್ತು ಅದರಲ್ಲಿದ್ದ ಸುಮುಖ್, ಶ್ರೀನಿವಾಸ ಎಂಬವರು ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಜೀತೋ ವ್ಯಾನ್ ಎದುರಿನಿಂದ ಅಂದರೆ ಚಿತ್ತೂರು ಕಡೆಯಿಂದ ಕೊಲ್ಲೂರು ಕಡೆಗೆ ಹೋಗುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸತೀಶ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story