ಹೂಡೆ: ಮತದಾನ ಅರಿವು ಕಾರ್ಯಗಾರ
ಉಡುಪಿ, ಅ.12: ತೋನ್ಸೆ ಹೂಡೆಯ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಭರತ್, ಪ್ರಜಾ ಪ್ರಭುತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವುದರೊದಿಗೆ ಮತ ದಾನದ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಅಸ್ಲಂ ಹೈಕಾಡಿ, ಉಪನ್ಯಾಸಕರು ಉಪಸ್ಥಿತರಿದ್ದರು.
Next Story