ಸಚಿವ ಖಾದರ್ ಹುಟ್ಟುಹಬ್ಬ ಪ್ರಯುಕ್ತ ಅನ್ನ ವಿತರಣೆ
ಮಂಗಳೂರು, ಅ.13: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ರ ಅವರ 49ನೆ ಜನ್ಮದಿನಾಚರಣೆಯ ಪ್ರಯುಕ್ತ ಅನ್ನ ವಿತರಣಾ ಕಾರ್ಯಕ್ರಮವು ಶನಿವಾರ ನಗರದ ವೆನ್ಲಾಕ್ ಆಸ್ಪತ್ರೆ, ರೈಲು ನಿಲ್ದಾಣ, ನೆಹರೂ ಮೈದಾನದಲ್ಲಿರುವ ಅರ್ಹರಿಗೆ ಸಾಮಾಜಿಕ ಕಾರ್ಯಕರ್ತ ರಾಝಿಕ್ ಉಳ್ಳಾಲ್ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭ ದ.ಕ.ಜಿಪಂ ಸದಸ್ಯೆ ಮಮತಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story