ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಗಳೂರು, ಅ.14: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರವಿವಾರ ಸಂಜೆ 4 ಗಂಟೆಯ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಗರದ ಕದ್ರಿ ಶಿವಬಾಗ್ನ ಸಿಟಿ ಕಾರ್ಪೊರೇಶನ್ ಕಟ್ಟಡದಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು.
ಸಂಜೆ 5 ಗಂಟೆಗೆ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನಲ್ ಸೆಂಟರ್ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಟ್ರಸ್ಟ್ನಿಂದ ಆಯೋಜಿಸಿದ ಬ್ರಾಂಡ್ ಮಂಗಳೂರು ಮತ್ತು ಪತ್ರಕರ್ತರ ಗ್ರಾಮ ವಾಸ್ತವ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಮತ್ತು ಮಂಗಳೂರು ದಸರಾ 2018ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Next Story