ಪುತ್ತೂರು: ಬೈಕ್ ಢಿಕ್ಕಿ; ಪಾದಚಾರಿ ಮೃತ್ಯು
ಪುತ್ತೂರು, ಅ. 15: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಎಂಬಲ್ಲಿ ರವಿವಾರ ನಡೆದಿದೆ.
ಪುತ್ತೂರು ತಾಲೂಕಿನ ತಿಂಗಳಾಡಿ ನೆಲ್ಲಿಗುರಿ ಮೂಲದವರಾಗಿದ್ದು, ಮುಕ್ರಂಪಾಡಿಯಲ್ಲಿ ವಾಸವಾಗಿರುವ ವಿಘ್ನೇಶ್ವರ ಭಟ್ (67) ಮೃತರು ಎಂದು ಗುರುತಿಸಲಾಗಿದೆ.
ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಬೈಕ್ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Next Story