ಬಿಎಎಂಎಸ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ
ಉಡುಪಿ, ಅ.15: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ 2018-19ನೇ ಸಾಲಿನಲ್ಲಿ ಆಯುರ್ವೇದ ಅಧ್ಯಯನಕ್ಕೆ ಪ್ರವೇಶ ಪಡೆದ ಪ್ರಥಮ ವರ್ಷದ ಬಿ.ಎ.ಎಂ.ಎಸ್. ಪದವಿ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ನಾತಕೋತ್ತರ ಡೀನ್ ಡಾ.ನಿರಂಜನ್ ರಾವ್, ಸ್ನಾತಕೋತ್ತರ ಸಹಾಯಕ ಡೀನ್ ಡಾ.ನಾಗರಾಜ್ ಎಸ್. ಉಪಸ್ಥಿತರಿದ್ದರು.
ಕಾಲೇಜಿನ ಜನಪದ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಔಷಧಿ ದ್ರವ್ಯಗಳ ಮಾಹಿತಿ ಕಾರ್ಯಕ್ರಮ ಮತ್ತು ಪ್ರದರ್ಶನವನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ. ಸ್ವಾಗತಿಸಿದರು. ರಸಶಾಸ್ತ್ರ ಮತ್ತು ಭೈಷಜ್ಯ ಕಲ್ಪನ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿಯ ಸಹಾಯಕ ಡೀನ್ ಡಾ.ವೀರ ಕುಮಾರ ಕೆ. ವಂದಿಸಿದರು. ಸಂಹಿತ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಲಿಖಿತಾ ಡಿ.ಎನ್. ಕಾರ್ಯಕ್ರಮ ನಿರೂಪಿಸಿದರು.