ಸ್ಕೂಟರ್ಗೆ ಬೈಕ್ ಢಿಕ್ಕಿ; ಸವಾರನಿಗೆ ಗಾಯ
ಮಂಗಳೂರು, ಅ.15: ಸ್ಕೂಟರ್ಗೆ ಬೈಕ್ಗೆ ಢಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಬಿಕರ್ನಕಟ್ಟೆಯ ಅಳಕೆ ಸ್ಟೋರ್ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.
ನಗರದ ಶಕ್ತಿನಗರ ನಿವಾಸಿ ಚೇತನಾ(37) ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಶಕ್ತಿನಗರದ ತಮ್ಮ ಮನೆಯಿಂದ ಸೈಂಟ್ ಆ್ಯಗ್ನೇಸ್ ಕಾಲೇಜು ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ ವೇಳೆ ಘಟನೆ ನಡೆದಿದೆ. ಬಿಕರ್ನಕಟ್ಟೆಯ ಅಳಕೆ ಸ್ಟೋರ್ ಎಂಬಲ್ಲಿ ತೆರೆದ ಡಿವೈಡರ್ ಬಳಿ ತಿರುವು ಪಡೆದುಕೊಂಡು ಮುಂದೆ ಸಾಗುತ್ತಿದ್ದರು. ಈ ವೇಳೆ ಕುಲಶೇಖರ ಕೈಕಂಬ ಕಡೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಸುಚರಿತ್ ನಿಯಂತ್ರಣ ತಪ್ಪಿ ಸ್ಕೂಟರ್ಗೆ ಢಿಕ್ಕಿ ಹೊಡೆಸಿದ್ದಾರೆ.
ಪರಿಣಾಮ ಚೇತನಾ ರಸ್ತೆಗೆಸೆಯಲ್ಪಟ್ಟು ಗಾಯಗೊಂಡರು. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಕುರಿತು ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story