ಮಣಿಪಾಲ: ವೈದ್ಯೆಯ ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಮಣಿಪಾಲ, ಅ.15: 80 ಬಡಗುಬೆಟ್ಟು ಗ್ರಾಮದ ಭವಾನಿ ನಗರ ಎಂಬಲ್ಲಿ ವೈದ್ಯರೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಅ.13ರ ಮಧ್ಯಾಹ್ನ ಎರಡು ಗಂಟೆಯಿಂದ ಅ.14ರಂದು ಬೆಳಗಿನ ಮಧ್ಯಾವಧಿಯಲ್ಲಿ ಮನೆಯ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ಬೆಡ್ ರೂಂನಲ್ಲಿದ್ದ ಕಪಾಟಿನ ಬೀಗ ಮುರಿದು ವಸ್ತುಗಳು ಚೆಲ್ಲಾಪಿಲ್ಲಿ ಮಾಡಿರುವು ದಾಗಿ ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿರುವ ಡಾ. ಸರಿತಾ, ಮನೆಯಲ್ಲಿ ಬೆಲೆಬಾಳುವ ಬಂಗಾರ ಒಡವೆಗಳು ಇರುವುದಾಗಿ ದೂರವಾಣಿ ಮೂಲಕ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story