ಕಡಬ: ನಿಯಂತ್ರಣ ತಪ್ಪಿದ ಬೈಕ್ ಪಲ್ಟಿ; ಚಾಲಕನಿಗೆ ಗಾಯ
ಕಡಬ, ಅ.16. ಬೈಕೊಂಡು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮೀನಾಡಿ ಎಂಬಲ್ಲಿ ಮಂಗಳವಾರ ನಡೆದಿದೆ.
ಕೊಂಬಾರು ಕೆಂಜಾಳ ನಿವಾಸಿ ಲೋಕೇಶ್ ಹಾಗೂ ಸಕಲೇಶಪುರದ ಮಾರನಹಳ್ಳಿ ಹೆಗ್ಗದ್ದೆ ನಿವಾಸಿ ದಿನೇಶ್ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ಮೀನಾಡಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು, ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದಿನೇಶ್ ಗಂಭೀರ ಗಾಯಗೊಂಡಿದ್ದು, ಲೋಕೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story