ಮುಂಬೈಯಲ್ಲಿ ರೈಲಿಗೆ ಸಿಲುಕಿ ಕಡಬದ ವ್ಯಕ್ತಿ ಮೃತ್ಯು
ಕಡಬ, ಅ.17: ಕಡಬ ಮೂಲದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಮುಂಬಯಿಯಲ್ಲಿ ನಡೆದಿದೆ.
ಮೃತರನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಸಹೋದರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಮುಂಬಯಿಯಲ್ಲಿ ಇಂಜಿನಿಯರ್ ವೃತ್ತಿಯಲ್ಲಿದ್ದ ಹರಿಪ್ರಸಾದ್ ಮಂಗಳವಾರ ಸಂಜೆ ಮತ್ಸ್ಯಗಂಧಾ ಎಕ್ಸ್ಪ್ರೆಸ್ ರೈಲಿನಲ್ಲಿ ಹುಟ್ಟೂರಿಗೆ ಆಗಮಿಸುವವರಿದ್ದರು. ಈ ನಡುವೆ ಪನ್ವೇಲ್ ಸಮೀಪದ ಪೇನ್ ಎಂಬಲ್ಲಿ ರೈಲಿಗೆ ಸಿಲುಕಿ ಅವರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
Next Story