ತೆಂಕನಿಡಿಯೂರು ಕಾಲೇಜಿನಲ್ಲಿ ರಕ್ತದಾನ ಶಿಬಿರ
ಉಡುಪಿ, ಅ.17: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಉಡುಪಿ ಹೆಚ್ಡಿಎಫ್ಸಿ ಬ್ಯಾಂಕ್ಗಳ ಆಶ್ರಯದಲ್ಲಿ ರಕ್ತದಾನ ಶಿಬಿರ ಇತ್ತೀಚೆಗೆ ನಡೆಯಿತು.
ರಕ್ತದಾನ ಶಿಬಿರವನ್ನು ಉಡುಪಿ ಎಚ್ಡಿಎಫ್ಸಿ ಬ್ಯಾಂಕಿನ ಪ್ರಬಂಧಕ ಪಸನ್ನ ಕುಮಾರ್ ಉದ್ಘಾಟಿಸಿ ಮಾತನಾಡಿದರು. ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಗಣೇಶ ಮೋಹನ್ ಮಾತನಾಡಿ ರಕ್ತದಾನದ ಕುರಿತು ವಿವರಗಳನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಕ್ತದಾನ ಶಿಬಿರದ ಸಂಘಟಕ ಪ್ರೊ. ಉದಯ ಶೆಟ್ಟಿ ಕೆ ಸ್ವಾಗತಿಸಿದರು. ಯೂತ್ ರೆಡ್ಕ್ರಾಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ಗೀತಾ ಎನ್. ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಶರ್ಮಿಳಾ ಹಾರಾಡಿ ವಂದಿಸಿರು. ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ರಕ್ತನಿಧಿ ಕೇಂದ್ರ, ದಾನಿಗಳಿಂದ ಸಂಗ್ರಹಿಸಲಾದ 72 ಯೂನಿಟ್ ರಕ್ತವನ್ನು ಪಡೆದುಕೊಂಡಿತು.