ಸಾಸ್ತಾನ: ಸಹಕಾರಿ ಕಾರ್ಯಕರ್ತರಿಗೆ ಅಭ್ಯಾಸ ವರ್ಗ
ಬ್ರಹ್ಮಾವರ, ಅ.4: ಸಹಕಾರ ಭಾರತಿಯ ಉಡುಪಿ ಜಿಲ್ಲೆಯ ವತಿಯಿಂದ ಬ್ರಹ್ಮಾವರ ತಾಲೂಕಿನ ಸಹಕಾರಿ ಕಾರ್ಯಕರ್ತರಿಗೆ ಅಭ್ಯಾಸ ವರ್ಗವನ್ನು ಇತ್ತೀಚೆಗೆ ಸಾಸ್ತಾನ ಶಿವಕೃಪಾ ಕ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಸಹಕಾರ ಭಾರತಿಯ ರಾಷ್ಟ್ರೀಯ ಉಪಾಧ್ಯಕ್ಷ ಕೊಂಕೋಡಿ ಪದ್ಮಾನಾಭ ಉದ್ಘಾಟಿಸಿದರು. ರಾಜ್ಯ ಸಹ ಸಂಘಟನ್ ಪ್ರಮುಖ್ ಹರೀಶ್ ಆಚಾರ್ಯ, ಸಹಕಾರ ಭಾರತಿಯ ರಾಜ್ಯ ಮಹಿಳಾ ಪ್ರಮುಖ್ ಸುಮನಾ ಶರಣ್, ಸಹಕಾರ ಭಾರತಿಯ ಬ್ರಹ್ಮಾವರ ತಾಲೂಕು ಅಧ್ಯಕ್ಷ ಅಶೋಕ್ ಪ್ರಭು, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಸಿಇಓ ಭುವನೇಶ್ ಪ್ರಭು ಉಪಸ್ಥಿತರಿದ್ದರು.
ಸಹಕಾರ ಭಾರತಿಯ ಉಡುಪಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಸಮಾರೋಪ ಭಾಷಣ ಮಾಡಿದರು. ಸಹಕಾರ ಭಾರತಿಯ ಬ್ರಹ್ಮಾವರ ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ ಸ್ವಾಗತಿಸಿದರು. ಕಾರ್ಯ ದರ್ಶಿ ರಾಘವೇಂದ್ರ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯ ಕ್ರಮದಲ್ಲಿ ಒಟ್ಟು 93 ಪ್ರತಿನಿಧಿಗಳು ಭಾಗವಹಿಸಿದ್ದರು.
Next Story