ಮಣಿಪಾಲ: ಅಪಾರ್ಟ್ಮೆಂಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಉಡುಪಿ, ನ.7: ಮಣಿಪಾಲದ ಮನೀಶ್ ಸರ್ವೀಸ್ ಅಪಾರ್ಟ್ಮೆಂಟ್ನ ಕೊಠಡಿಯೊಂದರಲ್ಲಿ ವಾಸವಿದ್ದ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಸಾರ್ಥಕ್ ದುಲಿಯಾ (29) ಎಂದು ಗುರುತಿಸಲಾಗಿದೆ. ನ.2ರಂದು ಸಂಜೆ 5:30ರಿಂದ ನ.7ರ ಬೆಳಗ್ಗೆ 10ರ ಮಧ್ಯಾವಧಿಯಲ್ಲಿ ಯಾವುದೋ ಕಾರಣದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story