ಬಂಟ್ವಾಳ ಬಿಜೆಪಿಯಿಂದ ಶ್ರದ್ಧಾಂಜಲಿ ಸಭೆ
ಬಂಟ್ವಾಳ, ನ. 12: ಬಿಜೆಪಿ ಹಿರಿಯ ನೇತಾರ, ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸೋಮವಾರ ಪಕ್ಷದ ಕಚೇರಿ ಶ್ರದ್ಧಾಂಜಲಿ ಸಭೆ ನಡೆಯಿತು.
ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಶ್ರದ್ಧಾಂಜಲಿ ಅರ್ಪಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕ್ಷೇತ್ರದ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸುಗುಣ ಕಿಣಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಗೋವಿಂದ ಪ್ರಭು, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ವಿಜಯ ರೈ, ಶ್ರೀಕಾಂತ್ ಶೆಟ್ಟಿ, ಗಣೇಶ್ ರೈ, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ರವೀಂದ್ರ ಕಂಬಳಿ, ವಜ್ರನಾಥ ಕಲ್ಲಡ್ಕ, ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ಸಂತೋಷ್ ಕುಮಾರ್, ವಿಠಲ್ ನಾಯ್ಕ, ಗೋಪಾಲ್ ಸುವರ್ಣ, ಪ್ರಮೋದ್ ಕುಮಾರ್, ಗುರುದತ್ ನಾಯಕ್, ವಿರೇಂದ್ರ ಕುಲಾಲ್, ಸಮಿತಿಯ ಅಧ್ಯಕ್ಷ-ಕಾರ್ಯದರ್ಶಿಗಳು, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.
Next Story