ರಾಧಾಕೃಷ್ಣ ಆಚಾರ್ಯ ನಿಧನ
ಉಡುಪಿ, ನ.12: ಮಹಾರಾಷ್ಟ್ರ ಅಪೆಕ್ಸ್ ಬ್ಯಾಂಕ್ನ ಸಹಾಯಕ ಮಹಾ ಪ್ರಬಂಧಕ ಹಾಗೂ ಮಂಗಳೂರು ಶ್ರೀನಿವಾಸ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ನಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿದ್ದ ರಾಧಾಕೃಷ್ಣ ಆಚಾರ್ಯ (64) ಸೋಮವಾರ ಅನಾರೋಗ್ಯದಿಂದ ನಿಧನರಾದರು.
ಇವರು ಉಡುಪಿ ರೋಟರಿ ಮಾಜಿ ಅಧ್ಯಕ್ಷರಾಗಿದ್ದು, ರೋಟರಿಯಲ್ಲಿ ಸುಮಾರು ಒಂದು ಕೋಟಿಗೂ ಮೇಲ್ಪಟ್ಟು ಮ್ಯಾಚಿಂಗ್ ಗ್ರಾಂಟ್ ಮೂಲಕ ಉಡುಪಿ ಜಿಲ್ಲೆಯ ಹಲವು ಶಾಲಾ ಕಾಲೇಜುಗಳಿಗೆ ಶೌಚಾಲಯದ ವ್ಯವಸ್ಥೆ ಮತ್ತು ಉಡುಪಿ ಜಿಲ್ಲಾಸ್ಪತ್ರೆಗೆ ರೋಟರಿ ಮೂಲಕ 140 ಕೆ.ವಿ. ಜನರೇಟರ್ ಕೊಡುಗೆ ನೀಡುವಲ್ಲಿ ಮುಖ್ಯಪಾತ್ರ ವಹಿಸಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story