ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ನಿಂದ ಮಕ್ಕಳ ದಿನಾಚರಣೆ
ಉಡುಪಿ, ನ.14: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹಾರಲಾಲ್ ನೆಹರೂ ಅವರ ಜನ್ಮ ದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ಬುಧವಾರ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಇರುವ ‘ಕೃಷ್ಣಾನುಗ್ರಹ’ ದತ್ತು ಸ್ವೀಕಾರ ಮತ್ತು ಪಾಲನಾ ಕೇಂದ್ರದ ವತಿಯಿಂದ ನಡೆಸಲ್ಪಡುವ ‘ಮಮತೆ ತೊಟ್ಟಿಲು’ ಇಲ್ಲಿ ಸಂಭ್ರಮದಿಂದ ಆಚರಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ನೆಹರೂ ಅವರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ. ಮಕ್ಕಳೊಡನೆ ಅವರು ಮಕ್ಕಳಾಗಿರುತಿದ್ದರು. ಅವರ ಜನ್ಮದಿನವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮಾದರಿಯಾಗಿ ಆಚರಿಸಿದೆ ಎಂದರು.
ಇದೇ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೃಷ್ಣಾನುಗ್ರಹ ದತ್ತು ಸ್ವೀಕಾರ ಮತ್ತು ಪಾಲನಾ ಕೇಂದ್ರದ ಮಕ್ಕಳಿಗೆ ಅಗತ್ಯವಿರುವ ದಿನಬಳಕೆಯ ವಿವಿಧ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಕೆ. ವಿಘ್ನೇಶ್ ಕಿಣಿ, ಇಮ್ರಾನ್ ಕಾಪು, ಶರೀಫ್ ಹೆಜಮಾಡಿ, ರಾಜ್ಯಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಜ್, ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದಾನಿಗಳಾದ ಪುರಂದರ ಸಾಲಿಯಾನ್, ಶಾಲಿನಿ ಪುರಂದರ ಸಾಲಿಯಾನ್, ಸವಿತಾ ಅಮೃತ್ ಶೆಣೈ, ಯುವ ಕಾಂಗ್ರೆಸ್ ನಾಯಕರಾದ ನೀರಜ್ ಪಾಟೀಲ್,ಸಂಜಯ್ ಆಚಾರ್ಯ, ಜೊಯೆಲ್ ಸೋನ್ಸ್, ಆಕಾಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.