ಮರಳು ಸಮಸ್ಯೆ: ಶಾಸಕರ ನಿಯೋಗದಿಂದ ಕೇಂದ್ರ ಸಚಿವರ ಭೇಟಿ
ಉಡುಪಿ, ನ.14: ಉಡುಪಿ ಜಿಲ್ಲೆಯ ಮರಳಿನ ಸಮಸ್ಯೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ಶಾಸಕರ ನಿಯೋಗವು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ನೇತೃತ್ವದಲ್ಲಿ ಇಂದು ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವ ಡಾ.ಹರ್ಷವರ್ದನ್ ಅವರನ್ನು ಭೇಟಿ ಮಾಡಿತು.
ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವ ಬಗ್ಗೆ ರಾಜ್ಯ ಸರಕಾರವು ಕೇಂದ್ರ ಸರಕಾರದಿಂದ ಕೇಳಿದಂತಹ ಸ್ಪಷ್ಟಿಕರಣ ಪತ್ರದ ಬಗ್ಗೆ ನಿಯೋಗ ಚರ್ಚಿಸಿತು. ಈ ಬಗ್ಗೆ ಒಂದು ವಾರದೊಳಗೆ ಕೇಂದ್ರ ಸರಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ನೀಡಲಾಗುವುದೆಂದು ಕೇಂದ್ರ ಭರವಸೆ ನೀಡಿತು.
ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಇಲಾಖಾ ಕಾರ್ಯದರ್ಶಿ ಶಹಾ ಮತ್ತು ಜಂಟಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಸುಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Next Story