ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ಬಂಟ್ವಾಳ, ನ. 14: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗ ಕಜೆಕಾರು ಗ್ರಾಮದ ಹಾರ್ದೊಟ್ಟುವಿನಲ್ಲಿ ಬುಧವಾರ ಸಂಜೆ ನಡೆದಿದೆ.
ಇಲ್ಲಿನ ನಿವಾಸಿ ವೆಂಕಪ್ಪ ನಾಯ್ಕ ಅವರ ಪುತ್ರ ಸದಾನಂದ ನಾಯ್ಕ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಅವಿವಾಹಿತರಾಗಿದ್ದ ಸದಾನಂದ, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮದ್ಯವ್ಯಸನಿಯಾಗಿದ್ದ ಸದಾನಂದ, ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story