Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ-...

ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ

ಆಳ್ವಾಸ್ ನುಡಿಸಿರಿ

ವಾರ್ತಾಭಾರತಿವಾರ್ತಾಭಾರತಿ16 Nov 2018 7:27 PM IST
share
ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ

ಮೂಡುಬಿದಿರೆ, ನ. 16: ಭಾಷೆಯನ್ನು ಬಳಸದೇ ಇದ್ದರೆ ಭಾಷೆ ಬೆಳೆಯಲು ಸಾಧ್ಯವಿಲ್ಲ. ಶಿಷ್ಠ ಜ್ಞಾನರಿಗೆ ಭಾಷೆಯ ಬಳಕೆಯೂ ಇಲ್ಲ, ಭಾಷಾಜ್ಞಾನದ ಬಗ್ಗೆ ಅರಿವು ತುಂಬಾ ಕಡಿಮೆ. ಇವರಿಗಿಂತ ಹೆಚ್ಚು  ಗ್ರಾಮೀಣ ಪ್ರದೇಶದ ಜನರು ಪದಗಳನ್ನು ಮಾತಿನ ಮೂಲಕವೇ ಸೃಷ್ಠಿಸುತ್ತಾರೆ. ಈ ಜನರ ಭಾಷೆಗಳಲ್ಲಿ ಭಾವನೆಗಳಿರುತ್ತವೆ. ಆದ್ದರಿಂದ ಇವರು ಸೃಷ್ಟಿಸುವ ಪದಗಳು ವೇಗವಾಗಿ ವಿಸ್ತರವಾಗುತ್ತದೆ ಎಂದು ಸಾಹಿತಿ ಪ್ರೊ.ಎಂ. ಕೃಷ್ಣೇ ಗೌಡ ಹೇಳಿದರು.

ಆಳ್ವಾಸ್ ನುಡಿಸಿರಿಯಲ್ಲಿ ಕನ್ನಡ ಪದಸೃಷ್ಟಿ- ಸ್ವೀಕರಣ ಮತ್ತು ಬಳಕೆ ಎಂಬ ವಿಷಯದ ಕುರಿತು ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ವಿಶೇಷೋಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆಯೂ ಅನುಭವದಿಂದ ತನ್ನದೇ ಸ್ವರೂಪ ಪಡೆದಿದೆ. ಆದ್ದರಿಂದ ಈ ಭಾಷೆಯನ್ನು ಅರಗಿಸಿಕೊಳ್ಳುವುದು ಸುಲಭ. ಪದಗಳ ಸೃಷ್ಠಿಗೆ ಅಗತ್ಯವಾದದ್ದು ಸಹಜವಾದ ಮಾತುಗಳು. ಎಲ್ಲರೊಂದಿಗೆ ಬೆರೆತು ಮಾತನಾಡಿದಾಗಲೇ ಪದ ಸೃಷ್ಠಿಯಾಗುವುದು. ಮಕ್ಕಳೊಂದಿಗೆ ಮಾತನಾಡುವಾಗ ಶಿಶುವಿನ ಕೆಲವು ಪದಗಳನ್ನು ಬಳಸುತ್ತೇವೆ. ಅದು ಮಕ್ಕಳಿಗಾಗಿಯೇ ಜನಿಸಿದ ಪದಗಳು. ಕನ್ನಡ ಭಾಷೆಯ ಒಂದು ಪದದಿಂದ ಅನೇಕ ಪದಗಳು ಹುಟ್ಟುತ್ತವೆ ಎಂದು ತಿಳಿಸಿದರು.

ಕ್ನನಡ ಭಾಷೆಯ ಬಹುತ್ವದ ಬಗ್ಗೆ ವಿವರಿಸಿದ ಪ್ರೊ.ಎಂ.ಕೃಷ್ಣೇಗೌಡ, ಇಂಗ್ಲಿಷ್‍ನಲ್ಲಿ ಒಂದೇ ರೀತಿಯ ಶಿಶುಗೀತೆಗಳು ಕಂಡುಬರುತ್ತವೆ. ಆದರೆ ಕನ್ನಡ ಭಾಷೆಗಳು ಪ್ರದೇಶಕ್ಕನುಸಾರವಾಗಿ ಬದಲಾಗುವುದರಿಂದ ಅತೀ ಹೆಚ್ಚು ಮತ್ತು ಸುಂದರವಾದ ಶಿಶು ಗೀತೆಗಳು ಹುಟ್ಟಿಕೊಂಡಿವೆ. ಕನ್ನಡ ಪದವನ್ನು ಬೆಳೆಸಿ ಉಳಿಸುವವರು ಗ್ರಾಮೀಣ ಪ್ರದೇಶದವರು ಎಂಬುದು ನಮ್ಮ ಕಣ್ಮುಂದೆ ಕಾಣಿಸುತ್ತಿದೆ. ನಗರ ಪ್ರದೇಶದವರು ಒಂದು ದಿನದಲ್ಲಿ 100 ಕನ್ನಡ ಪದಗಳನ್ನು ಮಾತನಾಡಿದರೆ, ಹಳ್ಳಿಗರು ಅದ್ಭುತ ಪದ ಜೋಡಣೆಗಳಿಂದ 500ಕ್ಕೂ ಹೆಚ್ಚು ಶಬ್ಧಗಳನ್ನು ಮಾತನಾಡುತ್ತಾರೆ ಎಂದು ಕನ್ನಡ ಭಾಷೆಯ ಸೌಂದರ್ಯದ ಬಗ್ಗೆ ವಿವರಿಸಿದರು.

ಕರ್ನಾಟಕದ ಒಂದು ಭಾಗವಾದ ತುಳು ಭಾಷೆಯೂ ಸಾಹಿತ್ಯ, ಮಾಧ್ಯಮ, ಸಿನೆಮಾ ಕ್ಷೇತ್ರದಲ್ಲಿ ಬೆಳೆಯದಿದ್ದರೂ ಇವರಲ್ಲಿ ಜನಪದ ಸಂಪತ್ತು ಅಗಾಧವಾಗಿದೆ. ಕೇವಲ ಮಾತಿನ ಮೂಲಕವೇ ತಮ್ಮ ಭಾಷೆಯನ್ನು ಬೆಳೆಸುತ್ತಾರೆ ಉಳಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನುಡಿಸಿರಿ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಎಸ್. ಘಂಟಿ ಮತ್ತು ನುಡಿಸಿರಿ ಸಮಿತಿ ಉಪಾಧ್ಯಕ್ಷ ಡಾ.ಸಂಪತ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ಸುಧಾರಾಣಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X