ನ. 17 ರಂದು ಮೂಳೂರು ಸುನ್ನಿ ಸೆಂಟರ್ಗೆ ಸಚಿವ ಝಮೀರ್ ಖಾನ್ ಭೇಟಿ
ಉಡುಪಿ, ನ. 16: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಜ್ಜ್, ವಕ್ಫ್, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಝಮೀರ್ ಅಹ್ಮದ್ ಖಾನ್ ಅವರು ನ. 17 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರಿನ ಅಧೀನ ಸಂಸ್ಥೆಯಾದ ಮೂಳೂರಿನ ಮರ್ಕಝ್ ತಅಲೀಮಿಲ್ ಇಹ್ಸಾನಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10 ಕ್ಕೆ ಅಲ್ ಇಹ್ಸಾನ್ ಸ್ಕೂಲ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಂಸ್ಥೆಯ ಅಧ್ಯಕ್ಷ ಅಸ್ಸಯ್ಯಿದ್ ಆಟಕೋಯ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ದೇವಿ ಪ್ರಸಾದ್ ಬೆಳಪು, ಡಿಕೆಯಸ್ಸಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಹಾತಿಂ ಕಂಚಿ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಮೌಲಾನಾ ಯು ಕೆ ಮುಸ್ತಫಾ ಸಅದಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
Next Story