Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೀರ್ತನೆಗಳ ಮೂಲಧಾತು ಇರುವುದು...

ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ

ಮೂಡುಬಿದಿರೆ,

ವಾರ್ತಾಭಾರತಿವಾರ್ತಾಭಾರತಿ17 Nov 2018 10:47 PM IST
share
ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ

ಮೂಡುಬಿದಿರೆ, ನ.17: ದಾಸರು ಅಭಿವ್ಯಕ್ತಿಯಲ್ಲಿ ಬಹುರೂಪತ್ವವನ್ನು ಅನುಸರಿಸಿದ್ದಲ್ಲದೆ ಏಕರೂಪದ ಸೈದ್ಧಾಂತಿಕತೆಯ ಅಸಮ್ಮತಿಯನ್ನು ತಮ್ಮ ಕೀರ್ತನೆಗಳ ಮೂಲಕ ತೋರ್ಪಡಿಸುತ್ತಾ ಹೋದರು. ಯಾವ ಪಠ್ಯ ಸಂಬೋಧನೆ ಮಾಡುವುದಿಲ್ಲವೋ ಅದು ಸ್ವೀಕರಿಸುವ ಸಮುದಾಯವನ್ನು ಮಾನ್ಯ ಮಾಡುವುದಿಲ್ಲ, ಕೀರ್ತನೆಗಳ ಮೂಲಧಾತು ಇರುವುದೇ ಸಂಬೋಧನೆಯಲ್ಲಿ ಎಂದು ಸಂಶೋಧಕ ಡಾ. ಎಚ್. ಎನ್ ಮುರುಳೀಧರ್ ತಿಳಿಸಿದರು.

ಆಳ್ವಾಸ್ ನುಡಿಸಿರಿಯ ಎರಡನೇ ದಿನದ ಮೊದಲ ಗೋಷ್ಠಿ ಕರ್ನಾಟಕ ದರ್ಶನ, ಅಧ್ಯಾತ್ಮ ಪರಂಪರೆಯಲ್ಲಿ ಕೀರ್ತನೆಗಳ ಬಗ್ಗೆ ಅವರು ತಮ್ಮ ವಿಚಾರ ಮಂಡಿಸಿದರು.

ಸಿದ್ಧಾಂತದ ಕಡೆಯಿಂದ ಮನುಷ್ಯರನ್ನು ನೋಡುತ್ತಿದ್ದ ಪಂಡಿತ ಮಂಡಳಿಗೆ ಪ್ರತ್ಯುತ್ತರ ನೀಡುವ ಸಲುವಾಗಿ ಕೀರ್ತನೆಗಳು ಹುಟ್ಟಿಕೊಂಡದಲ್ಲದೆ ಕೀರ್ತನೆ ಗಳು ಮನುಷ್ಯನ ಕಡೆಯಿಂದ ಸಿದ್ಧಾಂತವನ್ನು ನೋಡಲೆತ್ನಿಸಿತು. ಹಲವು ದನಿಗಳ ಮೂಲಕ ಮಾತನಾಡಿದ ದಾಸರು ಪ್ರಯೋಗದ ಉದ್ದೇಶವನ್ನಿರಿಸಿ ಕೊಳ್ಳದೆ ವಿಸ್ತರಣೆಯ ಚಿಂತನೆಯನ್ನು ಮೈಗೂಡಿಸಿಕೊಂಡರು ಎಂದು ಹೇಳಿದರು.

ಸ್ಥಳೀಯ ದೈನಂದಿನ ವಿವರಗಳ ವಾಸ್ತವದ ನೆಲೆಯಲ್ಲಿ ಅಧ್ಯಾತ್ಮದ ನೆಲೆಯನ್ನು ಕಟ್ಟಿದ ಕೀರ್ತನಕಾರರು ಮೂರ್ತದ ಆರಾಧಕರಾದರು. ಪಂಡಿತ ಮಂಡಳಿಗೆ  ಕ್ರಿಯಾ-ಕರ್ಮಗಳ ಕಂತೆಯಾದ ಅಧ್ಯಾತ್ಮವನ್ನು ದಾಸರು ಮದ್ಯವರ್ತಿಗಳಿಂದ ಮುಕ್ತಗೊಳಿಸಿ ಶ್ರೀಸಾಮಾನ್ಯರತ್ತ ಹರಿಸಲು ಯತ್ನಿಸಿದರು ಎಂದು ಅಭಿಪ್ರಾಯಪಟ್ಟರು.

ಕೀರ್ತನಕಾರರು ಲೋಕೈಕ ಮತ್ತು ಅಧ್ಯಾತ್ಮವನ್ನು ಬೇರೆ ಬೇರೆ ಮಾಡದೆ ದೈನಂದಿನ ಕೆಲಸ ಕಾರ್ಯದಲ್ಲಿ ಹೊರಹೊಮ್ಮುವುದೇ ಅಧ್ಯಾತ್ಮ ಎಂಬ ತತ್ವವನ್ನು ಸಾರಿದರು. ಅಸ್ತಿತ್ವದ ಅಗಾಧತೆಗೆ, ಅನಂತತೆಗೆ ಶರಣಾಗುವುದೇ ದಾಸರ ಚಿಂತನೆಯಾಗಿದ್ದು ದಾಸರಲ್ಲಿ ಸಾಧನೆಯಾವುದು? ಸಿದ್ಧಿಯಾವುದು? ಎಂಬುದನ್ನು ಅರಿಯಲು ಕಷ್ಟಸಾಧ್ಯ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷೆ ಡಾ.ಮಲ್ಲಿಕಾ ಎಸ್. ಘಂಟಿ, ಆಳ್ವಾಸ್ ನುಡಿಸಿರಿ ಉಪಾಧ್ಯಕ್ಷ ಡಾ. ನಾ. ದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ವಿದ್ವಾನ್ ವಿನಾಯಕ್ ಭಟ್ ಗಾಳಿಮನೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X