ಜುಗಾರಿ ಅಡ್ಡೆಗೆ ದಾಳಿ; 9 ಮಂದಿ ಬಂಧನ
ಮಂಗಳೂರು, ನ.20: ಪಣಂಬೂರು ಠಾಣಾ ಸರಹದ್ದಿನ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಟರ್ಮಿನಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ಒಂಬತ್ತು ಮಂದಿ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.
ಮುನ್ನ ಯಾನೆ ಹರಿಪ್ರಸಾದ್, ಲಿಂಗರಾಜು, ಜಯಂತ್, ಪ್ರಸಾದ್, ರಮೇಶ್, ತೀರ್ಥಪ್ರಸಾದ್, ಕಾರ್ತಿಕ್, ಶರತ್, ಮುಹಮ್ಮದ್ ಸಲೀಂ ಬಂಧಿತ ಆರೋಪಿಗಳು. ಜುಗಾರಿ ಆಟಕ್ಕೆ ಬಳಸಿದ ನಗದು 12,600 ರೂ. ಇಸ್ಪೀಟ್ನ 52 ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಮಾರ್ಗದರ್ಶನದಂತೆ ಮಂಗಳೂರು ಉತ್ತರ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತ ರಾಜೇಂದ್ರ ಡಿ.ಎಸ್. ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಮಂಗಳೂರು ಉತ್ತರ ಉಪವಿಭಾಗ ರೌಡಿನಿಗ್ರಹ ದಳದ ಅಧಿಕಾರಿ, ಸಿಬ್ಬಂದಿ ಮತ್ತು ಪಣಂಬೂರು ಪೊಲೀಸರು ಶ್ರಮಿಸಿದ್ದಾರೆ.
Next Story