ರಂಗಮಂದಿರ, ರಂಗಾಯಣ ಮಂಜೂರು: ಆದಿಉಡುಪಿಯಲ್ಲಿ ಸಚಿವರಿಂದ ಸ್ಥಳ ಪರಿಶೀಲನೆ
ಉಡುಪಿ, ನ.21: ಉಡುಪಿ ಜಿಲ್ಲೆಗೆ ಮಂಜೂರಾಗಿರುವ ರಂಗಮಂದಿರ ಹಾಗೂ ರಂಗಾಯಣ ನಿರ್ಮಾಣಕ್ಕಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಇಂದು ನಗರದ ಆದಿಉಡುಪಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈಗಾಗಲೇ ಗುರುತಿಸಲಾಗಿರುವ ಸುಮಾರು 1.37 ಎಕರೆ ಜಾಗವನ್ನು ಪರಿಶೀಲಿಸಿದ ಸಚಿವರು, ರಂಗಮಂದಿರ ಹಾಗೂ ರಂಗಾಯಣ ನಿರ್ಮಾಣಕ್ಕಾಗಿ ಶೀಘ್ರವೇ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ಚಂದ್ರಶೇಖರ್, ಪೂರ್ಣಿಮಾ, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಜಿಪಂ ಸದಸ್ಯ ಜನಾರ್ದನ ತೋನ್ಸೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವ ಮೊದಲಾದವರು ಉಪಸ್ಥಿತರಿದ್ದರು.
Next Story