ಉದ್ಯೋಗ ಕಳೆದುಕೊಂಡ ಚಿಂತೆಯಲ್ಲಿ ಯುವಕ ಆತ್ಮಹತ್ಯೆ
ಕಾರ್ಕಳ, ನ.21: ಸುರತ್ಕಲ್ ಟೋಲ್ಗೇಟ್ನಲ್ಲಿ ಉದ್ಯೋಗ ಕಳೆದುಕೊಂಡ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಪೇರೂರು ಎಂಬಲ್ಲಿ ನ.20ರ ಮಧ್ಯಾಹ್ನದಿಂದ 21ರ ಬೆಳಗಿನ ಮಧ್ಯಾವಧಿಯಲ್ಲಿ ನಡೆದಿದೆ.
ಮೃತರನ್ನು ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಪೇರೂರು ನಿವಾಸಿ ಗಿರೀಶ್(33) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಇವರು ಕಳೆದ ಮೂರು ವರ್ಷಗಳಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಕೆಲಸ ಮಾಡಿ ಕೊಂಡಿದ್ದು, ಟೋಲ್ಗೇಟ್ನ ಗುತ್ತಿಗೆ ಬೇರೆಯವರು ವಹಿಸಿಕೊಂಡ ಕಾರಣ ಗಿರೀಶ್ ಕೆಲಸವಿಲ್ಲದೆ ಮನೆಯಲ್ಲಿಯೇ ಉಳಿದುಕೊಂಡಿದ್ದರು.
ಇದೇ ವಿಚಾರದಲ್ಲಿ ಮಾನಸಿಕವಾಗಿ ನೊಂದ ಅವರು ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story