ದ.ಕ. ಜಿಲ್ಲೆಯಲ್ಲಿ ಎಲ್ಲ ಸರಕಾರಿ ಕಾರ್ಯಕ್ರಮಗಳು ಮುಂದೂಡಿಕೆ
ಅಂಬರೀಶ್ ನಿಧನ ಹಿನ್ನೆಲೆ
ಬಂಟ್ವಾಳ, ನ.25: ನಟ-ಮಾಜಿ ಸಚಿವ ಅಂಬರೀಶ್ ನಿಧನರಾಗಿರುವ ಹಿನ್ನೆಲೆಯಲ್ಲಿ ಮೂರು ದಿನ ಶೋಕಾಚರಣೆಯನ್ನು ಸರಕಾರ ಘೋಷಿಸಿದ್ದು, ದ.ಕ. ಜಿಲ್ಲೆಯ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಇಂದು ಪೂರ್ವಾಹ್ನ 11:30ಕ್ಕೆ ತಾಲೂಕು ಕಚೇರಿ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮತ್ತು ಪುರಸಭೆ ಬಂಟ್ವಾಳ ಆಯೋಜನೆಯಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಸಮಾರಂಭ ಮತ್ತು ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ.
Next Story