ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯರ ಕಚೇರಿ 'ಪ್ರಿಯದರ್ಶಿನಿ' ಶುಭಾರಂಭ
ಬೆಳ್ತಂಗಡಿ, ಡಿ. 5: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ ಅವರ ನೂತನ ಸರಕಾರಿ ಕಚೇರಿ 'ಪ್ರಿಯದರ್ಶಿನಿ' ಬುಧವಾರ ಬೆಳ್ತಂಗಡಿ ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು.
ನೂತನ ಕಚೇರಿಗೆ ಚಾಲನೆ ನೀಡಿದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಮಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಸರಕಾರದ ಕಾರ್ಯ ದೇವರ ಕೆಲಸವಾಗಿರುವಂತೆ, ಜನಪ್ರತಿನಿಧಿಗಳಿಗೂ ದೇವರ ಕೆಲಸ ಮಾಡಿದ ಪುಣ್ಯಪ್ರಾಪ್ತಿಯಾಗುತ್ತದೆ. ಇಲ್ಲಿ ಜನಸಾಮಾನ್ಯರಿಗೆ ಉತ್ತಮ ಸೇವೆ ಸಿಗುವಂತಾಗಲಿ ಎಂದು ಹಾರೈಸಿದರು.
ಬೆಳ್ತಂಗಡಿ ಬಿಷಷ್ ಹೌಸ್ನ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿಲ್ ಹಾರೈಸಿದರು. ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೆ. ಗಂಗಾಧರ ಗೌಡ, ಮಾಜಿ ಶಾಸಕ ಕೆ. ವಸಂತ ಬಂಗೇರ, ಪ್ರಮುಖರಾದ ಉಮ್ಮರ್ ಕುಂಞಿ ಮುಸ್ಲಿಯಾರ್, ಜಿ.ಪಂ.ಸದಸ್ಯರಾದ ಶೇಖರ್ ಕುಕ್ಕೇಡಿ, ನಮಿತಾ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಪಕ್ಷದ ಉಸ್ತುವಾರಿ ಸವಿತಾ ರಮೇಶ್, ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ, ಸದಸ್ಯರಾದ ಪೀತಾಂಬರ ಹೇರಾಜೆ, ರಾಮಚಂದ್ರ ಗೌಡ, ಬ್ಲಾಕ್ ಅಧ್ಯಕ್ಷರಾದ ರಾಜಶೇಖರ ಅಜ್ರಿ, ಶ್ರೀನಿವಾಸ ಕಿಣಿ, ಎಪಿಎಂಸಿ ಅಧ್ಯಕ್ಷ ಕೇಶವ ಗೌಡ ಬೆಳಾಲು, ಪಕ್ಷದ ಮುಂದಾಳುಗಳಾದ ಇ. ಸುಂದರ ಗೌಡ, ಶೈಲೇಶ್ ಕುಮಾರ್, ಅಭಿನಂದನ್ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಮಾಜಿಕ ಮುಂದಾಳುಗಳು, ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಭೇಟಿ ನೀಡಿ, ಶುಭಕೋರಿದರು. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಸ್ವಾಗತಿಸಿದರು. ಜಿ.ಪಂ.ಸದಸ್ಯ ಶಾಹುಲ್ ಹಮೀದ್ ವಂದಿಸಿದರು.