ಹಿರಿಯರ ಕ್ರೀಡಾಕೂಟ: ಭಾಸ್ಕರ್, ರಹ್ಮಾನ್ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು, ಡಿ.7: ನಗರದ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ದ.ಕ. ಜಿಲ್ಲಾ ಹಿರಿಯರ ಕ್ರೀಡಾಕೂಟದಲ್ಲಿ ಬಜಾಲ್ ಜಲ್ಲಿಗುಡ್ಡೆ ನಿವಾಸಿ, ಅರಣ್ಯ ಇಲಾಖಾ ನಿವೃತ್ತ ಅಧೀಕ್ಷಕ ಭಾಸ್ಕರ್ ಕೆ. ಮೂರು ಬೆಳ್ಳಿ ಪದಕಗಳನ್ನು ಜಯಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ.ಕ. ಜಿಲ್ಲಾ ಹಿರಿಯರ ಅಥ್ಲೆಟಿಕ್ಸ್ ಅಸೋಸಿಯೇಶನ್ ಜೊತೆ ಕಾರ್ಯದರ್ಶಿಯೂ ಆಗಿರುವ ಭಾಸ್ಕರ್ 5 ಕಿ.ಮೀ. ವೇಗದ ನಡಿಗೆ, 100 ಮೀ. ಹಾಗೂ 200 ಮೀ. ಓಟಗಳಲ್ಲಿ ಮೂರು ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ.
* ಉಳ್ಳಾಲ ಮಾಸ್ತಿಕಟ್ಟೆಯ ಅಬ್ದುರ್ರಹ್ಮಾನ್ 100 ಮೀಟರ್ ಮತ್ತು 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟವು ಡಿ.8, 9ರಂದು ಶಿವಮೊಗ್ಗದಲ್ಲಿ ಜರುಗಲಿದೆ.
Next Story