ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು
ಪಡುಬಿದ್ರಿ, ಡಿ. 10: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಅಡ್ವೆ ಸಣ್ಣೋಣಿ ಕ್ರಾಸ್ ಬಳಿ ಸೋಮವಾರ ನಡೆದ ಕಾರು-ದ್ವಿಚಕ್ರ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಡ್ವೆ ಸಣ್ಣೋಣಿ ನಿವಾಸಿ ಶಿವಣ್ಣ ಶೆಟ್ಟಿ (65) ಎಂದು ಗುರುತಿಸಲಾಗಿದೆ.
ಶಿವಣ್ಣ ಶೆಟ್ಟಿ ಕಾಂಜರಕಟ್ಟೆಯಲ್ಲಿರುವ ತನ್ನ ಕೋಳಿ ಅಂಗಡಿಯಿಂದ ದ್ವಿಚಕ್ರ ವಾಹನದಲ್ಲಿ ಅಡ್ವೆ ಸಣ್ಣೋಣಿಯ ಮನೆಗೆ ತೆರಳುತ್ತಿದ್ದಾಗ ಕಾರ್ಕಳ ಕಡೆಯಿಂದ ಬಂದ ಕಾರು ಅವರ ದ್ವಿಚಕ್ರ ವಾಹನದ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story